ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
Cross references
ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.
ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
ಕರ್ತನ ವಾಕ್ಯಗಳು ಶುದ್ಧವಾಕ್ಯಗಳಾಗಿವೆ: ಮಣ್ಣಿನ ಕುಲುಮೆಯಲ್ಲಿ ಏಳು ಸಾರಿ ಕರಗಿ ಪುಟಕ್ಕೆ ಹಾಕಿದ ಬೆಳ್ಳಿಯಂತೆ ಇವೆ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
ನೀನು ಎದ್ದು, ಚೀಯೋನನ್ನು ಕನಿ ಕರಿಸುವಿ; ಯಾಕಂದರೆ ಅದನ್ನು ಕರುಣಿಸುವದಕ್ಕೆ ಕಾಲವಾಯಿತು; ಹೌದು ನಿರ್ಣಯಿಸಿದ ಸಮಯವು ಬಂದಿದೆ.
ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.