ಆಗ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ ಬರೆಯು ವವನು ಎಲ್ಲಿ? ಅಂಗೀಕರಿಸುವವನು ಎಲ್ಲಿ? ಬುರುಜು ಗಳನ್ನು (ಗೋಪುರಗಳನ್ನು) ಲೆಕ್ಕಮಾಡಿದವನು ಎಲ್ಲಿ ಎಂದು ಅಂದುಕೊಳ್ಳುವಿರಿ.
Cross references
ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ.
ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.
ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
ಕಠಿಣವಾದ ಇಕ್ಕಟ್ಟುಗಳನ್ನು ನೋಡಮಾಡಿದ ನನ್ನನ್ನು ನೀನು ತಿರಿಗಿ ಬದುಕಿಸಿದಿ; ಭೂಮಿಯ ಆಗಾಧ ಗಳೊಳಗಿಂದ ನನ್ನನ್ನು ಮೇಲಕ್ಕೆ ತರುತ್ತೀ.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣ ಹೊಂದಿದನಂತರ ಬರೆದದ್ದು--
ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.
ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.