ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
Cross references
ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ತನ್ನ ಶಕ್ತಿಗೆ ತಿರುಗಿಕೊಂಡಿತು. ಐಗುಪ್ತ್ಯರು ಅದಕ್ಕೆದುರಾಗಿ ಓಡಿಹೋದರು. ಕರ್ತನು ಐಗುಪ್ತ್ಯರನ್ನು ಸಮುದ್ರದ ಮಧ್ಯದಲ್ಲಿ ಸಂಹರಿಸಿದನು.
ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ದೇವರು ಅದರ ಮಧ್ಯದಲ್ಲಿ ಇದ್ದಾನೆ; ಅದು ಕದಲದು; ದೇವರು ಹೊತ್ತಾರೆಯಲ್ಲಿ ಅದಕ್ಕೆ ಸಹಾಯ ಮಾಡುವನು.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.
ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ನೀನು ನಮ್ಮನ್ನು ಕುಂದಿಸಿದ ದಿವಸಗಳ ಪ್ರಕಾರವೂ ನಾವು ಕೇಡನ್ನು ನೋಡಿದ ವರುಷಗಳ ಪ್ರಕಾರವೂ ನಮ್ಮನ್ನು ಸಂತೋಷಪಡಿಸು.
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ.