ನಿನ್ನ ಕಾಲದಲ್ಲಿ ಸ್ಥಿರತೆಯಾ ಗಿಯೂ ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾ ಗಿಯೂ ಇರುವನು; ಕರ್ತನ ಭಯವೇ ಅವನ ಬೊಕ್ಕಸವಾಗಿರುವದು.
Cross references
ಇದರ ನಿಮಿತ್ತ ಅರಸನಾದ ಹಿಜ್ಕೀಯನೂ ಆಮೋ ಚನ ಮಗನಾಗಿರುವ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
ನಿನ್ನ ಭಯವೂ ಭರವಸೆಯೂ ನಿನ್ನ ನಿರೀಕ್ಷೆಯೂ ನಿನ್ನ ಮಾರ್ಗಗಳ ಯಥಾರ್ಥ ತೆಯೂ ಇವೇ ಅಲ್ಲವೋ?
ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
ಸತ್ಯತೆ ಸಾತ್ವಿಕತೆ ನೀತಿಗೋಸ್ಕರವೂ ನಿನ್ನ ಘನತೆಯಿಂದ ಅಭಿವೃದ್ಧಿಹೊಂದಿ ಸವಾರಿಮಾಡು; ನಿನ್ನ ಬಲಗೈ ಭಯಂಕರವಾದವುಗಳನ್ನು ನಿನಗೆ ಕಲಿಸುವದು.
ನೀವು ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಟ್ಟು ಆತನ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವ ಮನುಷ್ಯನು ಧನ್ಯನು.
ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
ಜ್ಞಾನವಂತರ ಕಿರೀಟವು ಅದರ ಐಶ್ವ ರ್ಯವೇ; ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವೇ.
ಕರ್ತನ ಭಯವೇ ಬಲವಾದ ಭರವಸವು; ಆತನ ಮಕ್ಕಳಿಗೆ ಆಶ್ರಯ ಸ್ಥಳವು ಇರುವದು.
ಮರಣದ ಪಾಶಗಳಿಂದ ತೊಲಗುವದಕ್ಕೆ ಕರ್ತನ ಭಯವು ಜೀವದ ಬುಗ್ಗೆ.
ಕಳವಳದಿಂದ ಕೂಡಿದ ದೊಡ್ಡ ಸಂಪತ್ತಿ ಗಿಂತ ಕರ್ತನ ಭಯದಿಂದ ಕೂಡಿದ ಸ್ವಲ್ಪವೇ ಉತ್ತಮ ವಾಗಿದೆ.
ಕರ್ತನ ಭಯವು ಜೀವಕ್ಕೆ ಒಲಿಯುತ್ತದೆ; ಅದನ್ನು ಹೊಂದಿದ ವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವದಿಲ್ಲ.
ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ.
ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ನೀತಿಯ ಕೆಲಸವು ಸಮಾಧಾನವೂ ನೀತಿಯ ಫಲವು ನಿತ್ಯವಾದ ಶಾಂತಿಯೂ ಭರವಸವೂ ಆಗಿರುವದು.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
ದುಃಖಪಡುವ ವರಾಗಿದ್ದರೂ ಯಾವಾಗಲೂ ಸಂತೋಷಪಡು ವವರೂ ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯ ವನ್ನುಂಟು ಮಾಡುವವರೂ ಏನೂ ಇಲ್ಲದವ ರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.
ದೇಹಸಾಧನೆಯು ಸ್ವಲ್ಪ ಮಟ್ಟಿಗೆ ಲಾಭಕರವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಲಾಭಕರವಾದದ್ದು; ಆದಕ್ಕೆ ಈಗಲೂ ಮುಂದೆ ಬರುವದಕ್ಕೂ ಜೀವಾಗ್ದಾನ ಉಂಟು.
ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.