ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ.
Cross references
ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
ಅವನ ಪಟ್ಟಣದ ಹೆಸರು ದಿನ್ಹಾಬಾ. ಬೆಳನು ಸತ್ತ ತರುವಾಯ ಅವನಿಗೆ ಬದಲಾಗಿ ಬೊಚ್ರ ದವನಾದಂಥ ಜೆರಹನ ಮಗನಾದ ಯೋಬಾಬನು ಆಳಿದನು.
ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು.
ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ.
ಕರ್ತ ನಾದ ದೇವರ ಮುಂದೆ ಮೌನವಾಗಿರ್ರಿ: ಕರ್ತನ ದಿನವು ಸವಿಾಪವಾಗಿದೆ; ಕರ್ತನು ಬಲಿಯನ್ನು ಸಿದ್ಧ ಮಾಡಿದ್ದಾನೆ; ತನ್ನ ಅತಿಥಿಗಳನ್ನು ಆಹ್ವಾನಿಸಿದ್ದಾನೆ.
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,