ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
Cross references
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ನಾನು ಮಿಂಚುವ ಕತ್ತಿಯನ್ನು ಹದಮಾಡುವಾಗ, ನನ್ನ ಕೈ ನ್ಯಾಯವನ್ನು ಹಿಡುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ ನನ್ನನ್ನು ಹಗೆಮಾಡುವವರಿಗೆ ಮುಯ್ಯಿ ತೀರಿಸುವೆನು.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು.
ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು.
ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.