ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
Cross references
ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
ಬಲವಾಗಿರು, ದೃಢವಾಗಿರು; ಈ ಜನರಿಗೆ ನಾನು ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ನೀನು ಬಾದ್ಯವಾಗಿ ಹಂಚಿಕೊಡುವಿ.
ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ; ನಾನು ನಿನ್ನ ತರುವಾಯ ಇರುವೆನು. ಹೀಗೆ ಆಗುವದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ ಅಂದನು.
ದಾವೀದನು ತನ್ನ ಮಗನಾದ ಸೊಲೊಮೋನ ನಿಗೆ ಹೇಳಿದ್ದೇನಂದರೆ--ನೀನು ಬಲಗೊಂಡು ದೃಢ ಪಟ್ಟು ಮಾಡು; ಭಯಪಡಬೇಡ, ಹೆದರಬೇಡ; ಯಾಕಂದರೆ ನನ್ನ ದೇವರಾಗಿರುವ ಕರ್ತನಾದ ದೇವರು ನಿನ್ನ ಸಂಗಡ ಇರುವನು. ಕರ್ತನ ಮನೆಯ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವ ವರೆಗೂ ಆತನು ನಿನ್ನನ್ನು ವಿಸರ್ಜಿಸುವದಿಲ್ಲ, ಕೈ ಬಿಡುವದಿಲ್ಲ.ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು.
ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
ಹಾರುವ ಪಕ್ಷಿಗಳಂತೆ ಸೈನ್ಯಗಳ ಕರ್ತನು ಯೆರೂಸಲೇಮನ್ನು ಕಾಪಾಡುವನು; ಅದನ್ನು ರಕ್ಷಿಸಿ ಕಾಯುವನು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವನು.
ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವದು, ತೊದಲು ಮಾತನಾ ಡುವವರ ನಾಲಿಗೆ ಸ್ವಚ್ಛವಾಗಿ ಮಾತಾಡುವದಕ್ಕೆ ಸಿದ್ಧ ವಾಗಿರುವದು.
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು.
ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ.
ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಆದರೆ ಈ ಸಂಗತಿಗಳು ಸಂಭವಿಸುವದಕ್ಕೆ ಪ್ರಾರಂಭಿಸಿದಾಗ ಮೇಲಕ್ಕೆ ನೋಡಿರಿ; ನಿಮ್ಮ ತಲೆಗಳನ್ನು ಎತ್ತಿರಿ; ಯಾಕಂದರೆ ನಿಮ್ಮ ವಿಮೋಚನೆಯು ಸವಿಾಪವಾಗಿದೆ ಅಂದನು.
ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
ಆದದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲ ವಾಗಿರು.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಇವುಗಳನ್ನು ಸಾಕ್ಷೀಕರಿಸುವಾತನು--ಖಂಡಿತ ವಾಗಿ ನಾನು ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಆಮೆನ್. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.