Cross references
ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?
ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.
ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ;
ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
ಯೇಸು ಅಲ್ಲಿಂದ ಹೊರಟಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸುತ್ತಾ--ದಾವೀದ ಕುಮಾರನೇ, ನಮ್ಮ ಮೇಲೆ ಕರುಣೆ ಇಡು ಎಂದು ಕೂಗಿ ಹೇಳುತ್ತಿದ್ದರು.
ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
ಆಗ ಜನರು ದೆವ್ವ ಹಿಡಿದಿದ್ದವನೂ ಕುರುಡನೂ ಮೂಕನೂ ಆಗಿದ್ದವನನ್ನು ಆತನ ಬಳಿಗೆ ತಂದರು; ಮತ್ತು ಆತನು ಅವನನ್ನು ಸ್ವಸ್ಥಮಾಡಿದ್ದರಿಂದ ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ನೋಡಿದನು.
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು.
ಆಗ ಕುರುಡರು ಮತ್ತು ಕುಂಟರು ದೇವಾಲಯ ದಲ್ಲಿ ಆತನ ಬಳಿಗೆ ಬಂದರು; ಆತನು ಅವರನ್ನು ಸ್ವಸ್ಥ ಮಾಡಿದನು.
ಆಗ ಅವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ತಂದು ಆತನು ತನ್ನ ಕೈಯನ್ನು ಅವನ ಮೇಲೆ ಇಡಬೇಕೆಂದು ಆತನನ್ನು ಬೇಡಿಕೊಂಡರು.
ತರುವಾಯ ಆತನು ಬೇತ್ಸಾಯಿದಕ್ಕೆ ಬಂದಾಗ ಅವರು ಒಬ್ಬ ಕುರುಡನನ್ನು ಆತನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಆತನನ್ನು ಬೇಡಿಕೊಂಡರು.
ಆಗ ಜನರು ಕೂಡಿಕೊಂಡು ಓಡಿ ಬರುವದನ್ನು ಯೇಸು ನೋಡಿ ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ --ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ; ಇನ್ನೆಂದಿಗೂ ಅವ ನೊಳಗೆ ಸೇರದಿರು ಎಂದು ನಾನು ನಿನಗೆ ಖಂಡಿತವಾಗಿ ಹೇಳುತ್ತೇನೆ ಅಂದನು.
ಕರ್ತನ ಆತ್ಮವು ನನ್ನ ಮೇಲೆ ಇದೆ; ಯಾಕಂದರೆ ಬಡವರಿಗೆ ಸುವಾರ್ತೆ ಸಾರುವದಕ್ಕೆ ಆತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯ ವುಳ್ಳವರನ್ನು ಸ್ವಸ್ಥಮಾಡುವದಕ್ಕೂ ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವದಕ್ಕೂ ಕುರುಡರಿಗೆ ದೃಷ್ಟಿ ಕೊಡುವದಕ್ಕೂ ಜಜ್ಜಲ್ಪಟ್ಟವರನ್ನು ಬಿ
ಅವರು ಆತನ ಬಳಿಗೆ ಬಂದಾಗ ಆತನಿಗೆ--ಬರಬೇಕಾದವನು ನೀನೋ? ಇಲ್ಲವೆ ನಾವು ಬೇರೊಬ್ಬನಿಗಾಗಿ ಎದುರು ನೋಡ ಬೇಕೋ? ಎಂದು ಕೇಳುವದಕ್ಕಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನು ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಿದರು.
ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು.
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.