ಒಣನೆಲವು ಕೊಳವಾಗು ವದು; ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗು ವದು. ಸರ್ಪಗಳು ವಾಸಿಸುವ ಮಲಗುವ ಪ್ರತಿ ಯೊಂದು ಸ್ಥಳವು ಹುಲ್ಲು, ಜೊಂಡುಗಳಿಂದ ತುಂಬಿ ರುವದು.
Cross references
ಅದು ಹಾಗೆಯೇ ಆಯಿತು. ಅವನು ಮರುದಿನ ಉದಯ ದಲ್ಲಿ ಎದ್ದು ಉಣ್ಣೆಯನ್ನು ತೆಗೆದುಕೊಂಡು ಅದರೊಳ ಗಿದ್ದ ಮಂಜಿನ ನೀರನ್ನು ಒಂದು ಬೋಗುಣಿ ತುಂಬಾ ಹಿಂಡಿದನು.
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ.
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
ಆದಾಗ್ಯೂ ಇನ್ನು ಸ್ವಲ್ಪ ಕಾಲದಲ್ಲಿ ಲೆಬ ನೋನ್ ಫಲವುಳ್ಳ ಹೊಲವಾಗಿದ್ದು ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವದಿಲ್ಲವೋ?
ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ.
ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.