ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ?
Cross references
ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.
ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ?
ಅವರು--ನಮ್ಮ ನಾಲಿಗೆಯಿಂದ ನಾವು ಬಲಗೊಳ್ಳುವೆವು; ನಮ್ಮ ತುಟಿಗಳು ನಮ್ಮವೇ; ನಮಗೆ ಪ್ರಭುವು ಯಾರು ಅನ್ನುತ್ತಾರೆ.
ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
ಅವರ ದೇವರು ಎಲ್ಲಿ ಎಂದು ಅನ್ಯ ಜನಾಂಗಗಳು ಯಾಕೆ ಹೇಳಬೇಕು?
ಕರ್ತನು ದೊಡ್ಡವನು; ನಮ್ಮ ಕರ್ತನು ಎಲ್ಲಾ ದೇವರುಗಳಿ ಗಿಂತ ದೊಡ್ಡವನೆಂದು ನಾನು ತಿಳಿದಿದ್ದೇನೆ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
ಈ ದೇಶವನ್ನು ಹಾಳುಮಾಡು ವದಕ್ಕೆ ಕರ್ತನಿಲ್ಲದೆ ನಾನು ಬಂದಿದ್ದೇನೋ? ಈ ದೇಶಕ್ಕೆ ವಿರೋಧವಾಗಿ ಬಂದು ಅದನ್ನು ಹಾಳುಮಾಡಿ ಬಿಡು ಎಂದು ಕರ್ತನೇ ನನಗೆ ಆಜ್ಞಾಪಿಸಿದನು ಎನ್ನುವದು.
ಇಲ್ಲವೇ ಕರ್ತನು ನಿಶ್ಚಯವಾಗಿ ನಮ್ಮನ್ನು ತಪ್ಪಿಸುವನು; ಈ ಪಟ್ಟಣವು ಅಶ್ಶೂರದ ಅರಸನ ವಶವಾಗುವದಿಲ್ಲ ಎಂದು ಹೇಳಿ ನೀವು ಕರ್ತನಲ್ಲಿ ಭರವಸೆ ಇಡುವಂತೆ ಮಾಡಿದರೂ;
ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.
ಈಗ ನೀವು ಸಿದ್ಧ ವಾಗಿದ್ದು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆ ಯನ್ನು ಆರಾಧಿಸಿದರೆ ಸರಿ; ಆದರೆ ನೀವು ಆರಾಧಿಸ ದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು ಎಂದು ಹೇಳಿದನು.
ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.