ನೀನು ಯಾರನ್ನು ನಿಂದಿಸಿ ದೂಷಿಸಿದ್ದೀ? ಯಾರಿಗೆ ವಿರೋಧವಾಗಿ ನಿನ್ನ ಸ್ವರವೆತ್ತಿ ನೀನು ಸೊಕ್ಕಿನಿಂದ ನೋಡಿದ್ದು ಯಾರನ್ನು? ಇಸ್ರಾ ಯೇಲಿನ ಪರಿಶುದ್ಧನಿಗಲ್ಲವೋ?
Cross references
ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು.
ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.
ಒಂದು ವಂಶಾ ವಳಿಯು ಇದೆ: ಅದರ ಕಣ್ಣುಗಳು ಎಷ್ಟೋ ಉನ್ನತ ವಾಗಿವೆ! ಅದರ ಕಣ್ಣು ರೆಪ್ಪೆಗಳು ಎತ್ತಲ್ಪಟ್ಟಿವೆ.
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ಆ ದಿನದಲ್ಲಿ ಮನುಷ್ಯನು ತನ್ನನ್ನು ಉಂಟು ಮಾಡಿದವನ ಮೇಲೆ ದೃಷ್ಟಿಯಿಡು ವನು ಇಸ್ರಾಯೇಲಿನ ಪರಿಶುದ್ಧನ ಕಡೆಗೆ ಅವನ ಕಣ್ಣುಗಳು ಲಕ್ಷಿಸುವವು.
ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗ ದಿಂದ ತೊಲಗಿರಿ; ಇಸ್ರಾಯೇಲ್ಯರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.
ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.
ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
ಹೀಗೆ ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಪಡಿಸುತ್ತೇನೆ; ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದ ಹಾಗೆ ನಾನು ಮಾಡುತ್ತೇನೆ. ಅನ್ಯಜನರು ಇಸ್ರಾಯೇಲ್ಯರಲ್ಲಿ ಒಬ್ಬ ಪರಿಶುದ್ಧನಾದ ಕರ್ತನು ನಾನೇ ಎಂದು ತಿಳಿಯುವರು.
ಆದರೆ ಯಾವಾಗ ಅವನ ಹೃದಯವು ಹೆಚ್ಚಿಸಲ್ಪಟ್ಟಿತೋ ಆಗ ಅವನ ಮನಸ್ಸು ಗರ್ವದಿಂದ ಕಠಿಣವಾಯಿತು. ಅವನು ತನ್ನ ರಾಜ್ಯದ ಸಿಂಹಾಸನದಿಂದ ಇಳಿಸಲ್ಪಟ್ಟನು. ಅವನ ಘನವನ್ನು ಅವನಿಂದ ತೆಗೆದುಹಾಕಿದರು;
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ.
ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.