ಆದದರಿಂದ ಅವುಗಳ ನಿವಾಸಿ ಗಳು ಬಲವಿಲ್ಲದವರಾಗಿ ಆಶಾಭಂಗ ಪಟ್ಟು ಕಳವಳ ಗೊಂಡರು; ಅವರು ಹೊಲದ ಹುಲ್ಲಿನಂತೆಯೂ ಹಸಿರು ಎಲೆಯಂತೆಯೂ ಮಾಳಿಗೆಯ ಮೇಲಿನ ಹುಲ್ಲಿನಂತೆಯೂ ಹೊಡೆಯುವದಕ್ಕಿಂತ ಮೊದಲೇ ಬಾಡಿಹೋಗುವ ಪೈರಿನಂತೆಯೂ ಇದ್ದರು.
Cross references
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
ಅವರು ಹುಲ್ಲಿನ ಹಾಗೆ ಬೇಗ ಕೊಯ್ಯಲ್ಪಟ್ಟು ಹಸುರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ.
ದುಷ್ಟರು ಚಿಗುರುವದು ಮತ್ತು ಅಕ್ರಮಗಾರರು ವೃದ್ಧಿಯಾಗು ವದು ಅವರು ಎಂದೆಂದಿಗೂ ನಿರ್ಮೂಲವಾಗುವದ ಕ್ಕಾಗಿಯೇ.
ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ.
ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
ಕೀಳುವದಕ್ಕಿಂತ ಮುಂಚೆ ಒಣಗಿ ಹೋಗುವ ಮಾಳಿಗೇ ಹುಲ್ಲಿನ ಹಾಗೆ ಅವರು ಇರಲಿ.
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು.
ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.
ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ಕೊಚ್ಚಿದ್ದನ್ನೂ ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.