ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
Cross references
ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.
ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.
ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.
ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.
ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.
ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.
ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;
ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.
ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.
ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.
ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.
ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.
ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.
ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.
ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.