Home Bibles ಯೆಶಾಯ 37:36 · ಕನ್ನಡ ಬೈಬಲ್
ಯೆಶಾಯ 37:36 · ಕನ್ನಡ ಬೈಬಲ್

ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

Cross references

ನಿರ್ಗಮಕಾಂಡ 12:23

ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.

ನಿರ್ಗಮಕಾಂಡ 12:30

ಆಗ ಫರೋಹನೂ ಅವನ ಎಲ್ಲಾ ಸೇವಕರೂ ಎಲ್ಲಾ ಐಗುಪ್ತ್ಯರೂ ರಾತ್ರಿಯಲ್ಲಿ ಎದ್ದರು. ಆಗ ಐಗುಪ್ತದಲ್ಲಿ ದೊಡ್ಡ ಗೋಳಾಟವಾಯಿತು. ಅಲ್ಲಿ ಸತ್ತವರಿಲ್ಲದ ಒಂದು ಮನೆಯಾದರೂ ಇರಲಿಲ್ಲ.

2 ಸಮುವೇಲ 24:16

ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.

2 ಅರಸುಗಳು 19:35

ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.

1 ದಿನವೃತ್ತಾಂತ 21:12

ಆದದರಿಂದ ನನ್ನನ್ನು ಕಳುಹಿ ಸಿದಾತನಿಗೆ ನಾನು ಹೇಳಬೇಕಾದ ಪ್ರತ್ಯುತ್ತರವೇನು ನೋಡಿಕೋ ಅಂದನು.

1 ದಿನವೃತ್ತಾಂತ 21:16

ಆಗ ದಾವೀದನು ತನ್ನ ಕಣ್ಣುಗಳನ್ನೆತ್ತಿ ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಕರ್ತನ ದೂತನನ್ನು ಕಂಡನು; ಅವನ ಕೈಯಲ್ಲಿ ಯೆರೂಸ ಲೇಮಿನ ಮೇಲೆ ಚಾಚಿದ್ದ ಬಿಚ್ಚುಕತ್ತಿ ಇತ್ತು. ಆಗ ದಾವೀದನೂ ಇಸ್ರಾಯೇಲಿನ ಹಿರಿಯರೂ ಗೋಣೀ ತಟ್ಟುಗಳಿಂದ ಮುಚ್ಚಿಕೊಂಡವರಾಗಿ ಮೋರೆ ಕೆಳಗಾಗಿ ಬಿದ್ದರು.

2 ದಿನವೃತ್ತಾಂತ 32:21

ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.

ಯೋಬ 20:5

ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.

ಯೋಬ 24:24

ಸ್ವಲ್ಪಕಾಲ ಅವರು ಉನ್ನತವಾಗಿದ್ದು ಇಲ್ಲದೆ ಹೋಗುತ್ತಾರೆ; ಅವರು ಕುಗ್ಗಿ ಹೋಗುತ್ತಾರೆ; ಎಲ್ಲರ ಹಾಗೆ ಅವರು ಮಾರ್ಗದಿಂದ ತೆಗೆದುಹಾಕಲ್ಪಡುತ್ತಾರೆ; ಅವರು ತೆನೆಗಳ ತಲೆಯಂತೆ ಕೊಯ್ಯಲ್ಪಡುತ್ತಾರೆ.ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?

ಯೋಬ 34:20

ಅವರು ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಮಧ್ಯ ರಾತ್ರಿಯಲ್ಲಿ ಜನರು ಕಳವಳಗೊಂಡು ಗತಿಸಿ ಹೋಗುತ್ತಾರೆ; ಪರಾಕ್ರಮಿಗಳು ಕೈ ಸೋಕದೆ ತೆಗೆಯಲ್ಪಡುತ್ತಾರೆ.

ಕೀರ್ತನೆಗಳು 35:5

ಅವರು ಗಾಳಿಯ ಮುಂದಿನ ಹೊಟ್ಟಿನ ಹಾಗೆ ಆಗಲಿ; ಕರ್ತನ ದೂತನು ಅವರನ್ನು ಹಿಂದಟ್ಟಲಿ, ಸೆಲಾ.

ಕೀರ್ತನೆಗಳು 46:6

ಅನ್ಯ ಜನಾಂಗವು ಘೋಷಿಸಿತು, ರಾಜ್ಯಗಳು ಕದಲಿದವು; ಆತನು ತನ್ನ ಧ್ವನಿಯನ್ನೆತ್ತಿ ಕೂಗಿದಾಗ ಭೂಮಿಯು ಕರಗಿತು.

ಕೀರ್ತನೆಗಳು 76:5

ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

ಯೆಶಾಯ 10:12

ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

ಯೆಶಾಯ 10:16

ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

ಯೆಶಾಯ 10:17

ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು, ಅದರ ಪರಿಶುದ್ಧನು ಜ್ವಾಲೆ ಯಂತಿರುವನು; ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು;

ಯೆಶಾಯ 10:25

ಇನ್ನು ಸ್ವಲ್ಪ ಕಾಲದಲ್ಲಿ, (ನಿಮ್ಮ ಮೇಲಿನ) ಉಗ್ರವು ತೀರಿ ನನ್ನ ಕೋಪವು ಅವರ ನಾಶನಕ್ಕಾ ಗುವದು.

ಯೆಶಾಯ 10:33

ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.

ಯೆಶಾಯ 29:5

ಅದೂ ಅಲ್ಲದೆ ನಿನ್ನ ಅನ್ಯರ ಗುಂಪು ಸೂಕ್ಷ್ಮ ವಾದ ದೂಳಿನಂತಾಗುವದು, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರು ವದು; ಹೌದು, ಅದು ಕ್ಷಣ ಮಾತ್ರದಲ್ಲಿ ಫಕ್ಕನೆ ಆಗುವದು.

ಯೆಶಾಯ 30:30

ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.

ಯೆಶಾಯ 30:31

ಕರ್ತನು ದಂಡದಿಂದ ದಂಡಿಸುವಾಗ ಅಶ್ಶೂರ್ಯವು ಆತನ ಸ್ವರದಿಂದಲೇ ಮುರಿದುಹೋಗು ವದು.

ಯೆಶಾಯ 31:8

ಆಗ ಅಶ್ಶೂರ್ಯನು ಕತ್ತಿಯಿಂದ ಬೀಳುವನು, ಬಲಿಷ್ಟ ನಿಂದಲ್ಲ; ಅವನು ನುಂಗಲ್ಪಡುವನು, ಹೀನನ ಕತ್ತಿ ಯಿಂದಲ್ಲ; ಅವನು ಕತ್ತಿಯ ಕಡೆಯಿಂದ ಓಡುವನು, ಅವನ ಯೌವನಸ್ಥರು ಸೋಲಿಸಲ್ಪಡುವರು.ಅವನು ಅಂಜಿಕೆಯಿಂದ ತನ್ನ ತ್ರಾಣಸ್ಥಾನಕ್ಕೆ ದಾಟಿಹೋಗು ವನು; ಅವನ ಪ್ರಧಾನರು ಧ್ವಜಕ್ಕೆ ಹೆದರಿಓಡು ವರು; ಚೀಯೋನಿನಲ್ಲಿ ಅಗ್ನಿಯನ್ನೂ ಯೆರೂಸಲೇಮಿ ನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಕರ್ತನ ನುಡಿ ಇದೇ.

ಯೆಶಾಯ 33:10

ಕರ್ತನು ಹೀಗನ್ನುತ್ತಾನೆ--ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿ ಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು.

ನಹೂಮ 1:12

ಕರ್ತನು ಹೀಗೆ ಹೇಳು ತ್ತಾನೆ--ಅವರು ಸುಖವುಳ್ಳವರಾಗಿಯೂ ಬಹು ಮಂದಿ ಯಾಗಿಯೂ ಇದ್ದರೂ ಆತನು ಹಾದುಹೋಗುವಾಗ ಹೀಗೆ ಕಡಿಯಲ್ಪಡುವರು; ನಾನು ನಿನ್ನನ್ನು ಕಷ್ಟಪಡಿಸಿ ದಾಗ್ಯೂ ಇನ್ನು ಮೇಲೆ ಕಷ್ಟಪಡಿಸೆನು.

ಅಪೋಸ್ತಲರ ಕೃತ್ಯಗಳು 12:23

ಅವನು ದೇವರಿಗೆ ಮಹಿಮೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಹೊಡೆದನು; ಆಗ ಅವನನ್ನು ಹುಳಗಳು ತಿಂದದ್ದರಿಂದ ಅವನು ಪ್ರಾಣ ಬಿಟ್ಟನು.

1 ತೆಸಲೋನಿಕದವರಿಗೆ 5:2

ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.

Interlinear

Choose Theme