ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.
ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ
ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.
ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.
ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.
ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.
ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.