ಓ ಕರ್ತನೇ, ನಾನು ನಿನ್ನ ಮುಂದೆ ಸತ್ಯವಾಗಿಯೂ ಯಥಾರ್ಥ ಹೃದಯದಿಂದಲೂ ನಡೆದು ನಿನ್ನ ದೃಷ್ಟಿ ಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಪು ಮಾಡಿಕೋ ಎಂದು ಬೇಡಿಕೊಂಡು ವ್ಯಥೆಪಟ್ಟು ಅತ್ತನು.
Cross references
ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಾನೇ ಸರ್ವಶಕ್ತನಾದ ದೇವರು; ನನ್ನ ಸನ್ನಿಧಿಯಲ್ಲಿ ನಡೆದು ನೀನು ಸಂಪೂರ್ಣನಾಗಿರು.
ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
ಅವನ ಸೇವಕರು ಅವನಿಗೆ --ಇದೇನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದಿ; ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದಿ ಅಂದರು.
ನೀನು ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ನಿನ್ನ ದೇವರಾದ ಕರ್ತನ ನಿಯಮಗಳನ್ನೂ ಆಜ್ಞೆಗಳನ್ನೂ ನ್ಯಾಯಗಳನ್ನೂ ಸಾಕ್ಷಿಗಳನ್ನೂ ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವ ಹಾಗೆ ಆತನ ಆಜ್ಞೆಯನ್ನು ಕೈಗೊಳ್ಳು.
ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ ಜನರು ಸಂತೋಷಪಟ್ಟರು. ಅವರು ಪೂರ್ಣ ಮನಸ್ಸಿನಿಂದ ಮನಃಪೂರ್ವಕವಾಗಿ ಕರ್ತನಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷದಿಂದ ಸಂತೋಷಪಟ್ಟನು.
ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
ಅವನು ಕರ್ತನ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು; ಆದರೆ ಪೂರ್ಣಹೃದಯದಿಂದಲ್ಲ.
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--
ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
ಆತನ ಹೆಜ್ಜೆಯನ್ನು ನನ್ನ ಕಾಲು ಹಿಡಿಯಿತು; ಆತನ ಮಾರ್ಗವನ್ನು ನಾನು ತೊಲಗದೆ ನೋಡಿಕೊಂಡೆನು.
ಅಕ್ರಮ ಮಾಡುವವರೇ, ನನ್ನ ಬಳಿಯಿಂದ ತೊಲ ಗಿರಿ; ಅಳುವ ನನ್ನ ಸ್ವರವನ್ನು ಕರ್ತನು ಕೇಳಿದ್ದಾನೆ;
ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
ಕರ್ತನು ನನ್ನ ನೀತಿಯ ಪ್ರಕಾರ ನನಗೆ ಪ್ರತಿಫಲ ಕೊಟ್ಟನು. ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಬದಲು ಕೊಟ್ಟನು.
ಕರ್ತನು ಇಕ್ಕಟ್ಟಿನ ದಿವಸದಲ್ಲಿ ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ಹೆಸರು ನಿನ್ನನ್ನು ಕಾಪಾಡಲಿ.
ನಿನ್ನ ಪ್ರೀತಿಯೂ ಕೃಪೆಯೂ ನನ್ನ ಕಣ್ಣುಗಳ ಮುಂದೆ ಅವೆ; ನಾನು ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.
ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.
ನಿನ್ನ ರೋಷದ ಮತ್ತು ನಿನ್ನ ರೌದ್ರದ ನಿಮಿತ್ತವೇ ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿ ದ್ದೇನೆ.
ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು.