ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
Cross references
ಆಗ ನಾತಾನನು ಅರಸ ನಿಗೆ--ನೀನು ಹೋಗಿ ನಿನ್ನ ಹೃದಯದಲ್ಲಿರುವದನ್ನೆಲ್ಲಾ ಮಾಡು; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ನೀನು ನಿನ್ನ ಬಾಯಿಂದ ಹೇಳಿದ್ದನ್ನು ಇಂದಿನ ಪ್ರಕಾರವೇ ನಿನ್ನ ಕೈಯಿಂದ ನೆರವೇರಿಸಿದ ಕಾರಣ ಈಗ ಇಸ್ರಾಯೇಲಿನ ದೇವರಾದ ಕರ್ತನೇ, ನಿನ್ನ ಮಕ್ಕಳು ತಮ್ಮ ಮಾರ್ಗಕ್ಕೆ ಜಾಗ್ರತೆಯಾಗಿದ್ದು ನೀನು ನನ್ನ ಮುಂದೆ ನಡೆದ ಪ್ರಕಾರ ಅವರು ನನ್ನ ಮುಂದೆ ನಡೆದರೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ತಪ್ಪದೆ ಕುಳಿತುಕೊಳ್ಳುವಂತೆ ಮಾಡುವೆನು ಎಂದು ನೀನು ನನ್ನ ತಂದೆಯೂ, ನಿನ್ನ ಸೇವಕನಾದ ದಾವೀದನಿಗೆ ಹೇಳಿದ ಮಾತು ನೆರವೇರಿಸು.
ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
ಆದರೆ ನಿನ್ನ ತಂದೆಯಾದ ದಾವೀದನಿಗೋಸ್ಕರ ನಿನ್ನ ಕಾಲ ದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಕೊಳ್ಳುವೆನು.
ಅವನ ತರುವಾಯ ಅವನ ಮಗನನ್ನು ನೇಮಿಸುವದಕ್ಕೂ ಯೆರೂಸಲೇಮನ್ನು ಸ್ಥಿರಪಡಿಸುವದಕ್ಕೂ ತನ್ನ ದೇವರಾದ ಕರ್ತನು ದಾವೀದನ ನಿಮಿತ್ತ ಯೆರೂ ಸಲೇಮಿನಲ್ಲಿ ಅವನಿಗೆ ದೀಪವನ್ನು ಕೊಟ್ಟನು.
ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
ಆಗ ನಾತಾನನು ದಾವೀದ ನಿಗೆ--ನಿನ್ನ ಹೃದಯದಲ್ಲಿ ಇರುವದೆಲ್ಲಾ ಮಾಡು; ದೇವರು ನಿನ್ನ ಸಂಗಡ ಇದ್ದಾನೆ ಅಂದನು.
ಅವನು ಇನ್ನೂ ಹುಡುಗನಾಗಿರುವಾಗ ತನ್ನ ಆಳ್ವಿಕೆಯ ಎಂಟನೇ ವರುಷದಲ್ಲಿ ತನ್ನ ಪಿತೃವಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ಕೆತ್ತಿದ ವಿಗ್ರಹಗಳನ್ನೂ ಎರಕಹೊಯಿದ ವಿಗ್ರಹಗಳನ್ನೂ ತೆಗೆದುಹಾಕಿ ಯೆಹೂದ ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.
ಅವನ ದಿವಸಗಳು ನೇಮಕವಾಗಿವೆ; ಅವನ ತಿಂಗಳುಗಳ ಲೆಕ್ಕ ನಿನ್ನ ಬಳಿಯಲ್ಲಿ ಅದೆ; ಅವನು ದಾಟಲಾರದ ಹಾಗೆ ಅವನ ಮೇರೆಗಳನ್ನು ಮಾಡಿದಿ.
ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
ಅವರು ಆತನನ್ನು ದೃಷ್ಟಿಸಿ ಪ್ರಕಾಶ ಹೊಂದಿದರು. ಅವರ ಮುಖಗಳು ನಾಚಿಕೆಪಡಲಿಲ್ಲ.
ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ಮೊರೆಗೆ ಕಿವಿಗೊಡು; ನನ್ನ ಕಣ್ಣೀರಿಗೆ ಮೌನ ವಾಗಿರಬೇಡ. ನಾನು ನಿನ್ನ ಸಂಗಡ ಪರದೇಶಸ್ಥನು; ನನ್ನ ತಂದೆಗಳೆಲ್ಲರ ಹಾಗೆ ಪ್ರವಾಸಿಯಾಗಿದ್ದೇನೆ.ಕರ್ತನೇ ನನ್ನನ್ನು ಉಳಿಸು; ಆಗ ನಾನು ಇಲ್ಲಿಂದ ಹೋಗಿಬಿಟ್ಟು ಇಲ್ಲದೆ ಹೋಗುವದಕ್ಕಿಂತ ಮುಂಚೆ ಬಲವನ್ನು ತಿರಿಗಿ ಪಡೆಯುವೆನು.
ನನ್ನ ಅಲೆದಾಡುವಿಕೆಗಳನ್ನು ನೀನು ಲೆಕ್ಕಿಸಿದ್ದೀ; ನನ್ನ ಕಣ್ಣೀರನ್ನು ನಿನ್ನ ಬುದ್ದಲಿಯಲ್ಲಿ ಹಾಕು; ಅದು ನಿನ್ನ ಪುಸ್ತಕದಲ್ಲಿ ಇಲ್ಲವೋ?
ನಾನು ಆದು ಕೊಂಡವನೊಂದಿಗೆ ಒಡಂಬಡಿಕೆ ಮಾಡಿದ್ದೇನೆ; ನನ್ನ ಸೇವಕನಾದ ದಾವೀದನಿಗೆ ಆಣೆ ಇಟ್ಟು ಹೇಳಿದ್ದೇ ನಂದರೆ--
ಕರ್ತನ ದೃಷ್ಟಿಯಲ್ಲಿ ಆತನ ಪರಿಶುದ್ಧರ ಮರಣವು ಅಮೂಲ್ಯವಾಗಿದೆ.
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ನೀನು ಅಶ್ಶೂರದ ಅರಸನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹವನ್ನು ಕೇಳಿ ಅವನನ್ನು ಕುರಿತು
ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
ಆದರೆ ಆ ದೂತನು ಅವನಿಗೆ--ಜಕರೀಯನೇ, ಭಯಪಡಬೇಡ; ಯಾಕಂದರೆ ನಿನ್ನ ಪ್ರಾರ್ಥನೆಯು ಕೇಳಲ್ಪಟ್ಟಿದೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನನ್ನು ಯೋಹಾನನೆಂದು ಕರೆಯಬೇಕು.
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
ನಾವು ಆತನ ಚಿತ್ತಾನುಸಾರ ವಾಗಿ ಏನಾದರೂ ಬೇಡಿಕೊಂಡರೆ ಆತನು ಕೇಳು ತ್ತಾನೆಂಬ ಭರವಸವು ಆತನಲ್ಲಿ ನಮಗುಂಟು.
ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.