ಹಿಜ್ಕೀ ಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದ ಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲ ವನ್ನೂ ತೋರಿಸಿದನು; ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
Cross references
ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ ಬಹು ಹೆಚ್ಚಾದ ಚಿನ್ನವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊರುವ ಒಂಟೆಗಳ ಸಂಗಡ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.
ಅವಳು ಅರಸನಿಗೆ ನೂರ ಇಪ್ಪತ್ತು ತಲಾಂತು ಚಿನ್ನವನ್ನೂ ಬಹುಸಮೃದ್ಧಿಯಾದ ಸುಗಂಧದ್ರವ್ಯಗ ಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧಗಳ ಹಾಗೆ ಇನ್ನೆಂದೂ ಬಂದದ್ದಿಲ್ಲ.
ಒಂದೇ ವರುಷದಲ್ಲಿ ಸೊಲೊಮೋನನಿಗೆ ಬಂದ ಬಂಗಾರವು ಆರು ನೂರ ಅರುವತ್ತಾರು ತಲಾಂತು ತೂಕವಾಗಿತ್ತು.
ಅವರವರು ಕಾಣಿಕೆಯಾಗಿ ಬೆಳ್ಳಿ ಬಂಗಾರದ ಪಾತ್ರೆಗಳನ್ನೂ ವಸ್ತ್ರಗಳನ್ನೂ ಆಯುಧ ಗಳನ್ನೂ ಸುಗಂಧಗಳನ್ನೂ ಕುದುರೆಗಳನ್ನೂ ಹೇಸರ ಕತ್ತೆಗಳನ್ನೂ ವರುಷ ವರುಷಕ್ಕೂ ನೇಮಕದ ಪ್ರಕಾರ ತರುತ್ತಾ ಇದ್ದರು.
ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.
ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ ಒಗಟುಗಳಿಂದ ಅವನನ್ನು ಶೋಧಿಸಲು ಅವಳು ಮಹಾಗುಂಪಿನ ಸಂಗಡ ಸುಗಂಧಗಳನ್ನೂ ಬಹು ಬಂಗಾರವನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಅವನ ಸಂಗಡ ಮಾತಾ ಡಿದಳು.
ಅವಳು ಅರಸನಿಗೆ ನೂರಿಪ್ಪತ್ತು ತಲಾಂತು ತೂಕ ಬಂಗಾರವನ್ನೂ ಬಹು ಹೆಚ್ಚಾದ ಸುಗಂಧಗಳನ್ನೂ ಅಮೂಲ್ಯವಾದ ಕಲ್ಲುಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಂಗಧಗಳು ತರುವಾಯ ಬಂದದ್ದಿಲ್ಲ.
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು.
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
ನನ್ನ ಐಶ್ವರ್ಯವು ಬಹಳವಾಗಿದೆ ಎಂದು ನನ್ನ ಕೈ ಬಹಳವಾಗಿ ಸಂಪಾದಿಸಿ ಕೊಂಡಿತೆಂದು ನಾನು ಸಂತೋಷಿಸಿದ್ದರೆ,
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.