ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀ ಯನ ಬಳಿಗೆ ಬಂದು ಅವನಿಗೆ--ಈ ಮನುಷ್ಯರು ಎಲ್ಲಿಂದ ನಿನ್ನ ಬಳಿಗೆ ಬಂದರು, ಅವರು ನಿನಗೆ ಏನು ಹೇಳಿದರು ಎಂದು ಕೇಳಲು, ಹಿಜ್ಕೀಯನು--ಅವರು ಬಹುದೂರ ದೇಶವಾದ ಬಾಬೆಲಿನಿಂದ ಬಂದರು ಎಂದು ಹೇಳಿದನು.
Cross references
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಹೋಗಿ ಅವ ನಿಗೂ ಇಸ್ರಾಯೇಲ್ಯರಿಗೂ--ನಾವು ದೂರ ದೇಶ ದಿಂದ ಬಂದೆವು; ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿರಿ ಅಂದರು.
ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
ಕರ್ತನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಅವನ ಬಳಿಗೆ ಬಂದು ಹೇಳಿದ್ದೇನಂದರೆ--ಒಂದು ಪಟ್ಟಣದಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.
ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.
ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು.
ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ಆದಕಾರಣ ಕರ್ತನ ಕೋಪವು ಅಮಚ್ಯನ ಮೇಲೆ ಹೊತ್ತಿತು; ಆತನು ಅವನ ಬಳಿಗೆ ಪ್ರವಾದಿ ಯನ್ನು ಕಳುಹಿಸಿದನು. ಅವನು ಅವನಿಗೆ--ತಮ್ಮ ಜನ ರನ್ನು ನಿನ್ನ ಕೈಯಿಂದ ತಪ್ಪಿಸಲಾರದ ದೇವರುಗಳನ್ನು ನೀನು ಹುಡುಕುವದೇನು ಅಂದನು.
ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
ನೀನು ಹೋಗಿ ಹಿಜ್ಕೀ ಯನಿಗೆ ಹೇಳತಕ್ಕದ್ದೇನಂದರೆ--ನಿನ್ನ ತಂದೆಯಾದ ದಾವೀದನ ದೇವರಾದ ಕರ್ತನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನೂ ಕೂಡಿಸುತ್ತೇನೆ.
ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ.