Home Bibles ಯೆಶಾಯ 4:2 · ಕನ್ನಡ ಬೈಬಲ್
ಯೆಶಾಯ 4:2 · ಕನ್ನಡ ಬೈಬಲ್

ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.

Cross references

ನಿರ್ಗಮಕಾಂಡ 28:2

ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.

ಕೀರ್ತನೆಗಳು 67:6

ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.

ಕೀರ್ತನೆಗಳು 72:16

ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.

ಕೀರ್ತನೆಗಳು 85:11

ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.

ಯೆಶಾಯ 10:20

ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.

ಯೆಶಾಯ 11:1

ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.

ಯೆಶಾಯ 11:4

ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.

ಯೆಶಾಯ 27:6

ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.

ಯೆಶಾಯ 27:12

ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.

ಯೆಶಾಯ 30:23

ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.

ಯೆಶಾಯ 37:31

ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.

ಯೆಶಾಯ 45:8

ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.

ಯೆಶಾಯ 53:2

ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.

ಯೆಶಾಯ 60:21

ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ಯೆರೆಮಿಯ 33:15

ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.

ಯೆಹೆಜ್ಕೇಲ 7:16

ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.

ಯೆಹೆಜ್ಕೇಲ 17:22

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.

ಹೊಶೇಯ 2:22

ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.

ಯೋವೇಲ 2:32

ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

ಯೋವೇಲ 3:18

ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.

ಒಬದ್ಯ 1:17

ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.

ಜೆಕರ್ಯ 3:8

ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.

ಜೆಕರ್ಯ 6:12

ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.

ಜೆಕರ್ಯ 9:17

ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.

ಮತ್ತಾಯ 24:22

ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.

ಲೂಕ 21:36

ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.

ಯೋಹಾನ 1:14

ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).

ರೋಮಾಪುರದವರಿಗೆ 11:4

ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

2 ಕೊರಿಂಥದವರಿಗೆ 4:6

ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.

2 ಪೇತ್ರ 1:16

ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.

ಪ್ರಕಟನೆ 7:9

ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ

Interlinear

Choose Theme