Home Bibles ಯೆಶಾಯ 4:6 · ಕನ್ನಡ ಬೈಬಲ್
ಯೆಶಾಯ 4:6 · ಕನ್ನಡ ಬೈಬಲ್

ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.

Cross references

ಕೀರ್ತನೆಗಳು 27:5

ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.

ಕೀರ್ತನೆಗಳು 91:1

ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.

ಕೀರ್ತನೆಗಳು 121:5

ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.

ಸಾಮೇತಿಗಳು 18:10

ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.

ಯೆಶಾಯ 8:14

ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.

ಯೆಶಾಯ 25:4

ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.

ಯೆಶಾಯ 30:30

ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.

ಯೆಶಾಯ 32:2

ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.

ಯೆಶಾಯ 32:18

ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.

ಯೆಹೆಜ್ಕೇಲ 11:16

ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.

ಮತ್ತಾಯ 7:24

ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.

ಹೆಬ್ರಿಯರಿಗೆ 6:18

ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.

ಹೆಬ್ರಿಯರಿಗೆ 11:7

ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

ಪ್ರಕಟನೆ 7:16

ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.

Interlinear

Choose Theme