ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
Cross references
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಕರ್ತನು ನಿನ್ನನ್ನು ಕಾಪಾಡುವಾತನಾಗಿದ್ದಾನೆ; ಕರ್ತನು ನಿನ್ನ ಬಲ ಗಡೆಯಲ್ಲಿ ನಿನ್ನ ನೆರಳಿನಂತೆ ಇದ್ದಾನೆ.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ ಭದ್ರವಾದ ಸ್ಥಾನಗಳಲ್ಲಿಯೂ ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.
ಆದದರಿಂದ ನೀವು ಹೇಳತಕ್ಕದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರನ್ನು ಅನ್ಯ ಜನಾಂಗ ಗಳಿಂದ ದೂರ ಹಾಕಿದ್ದಾಗ್ಯೂ ದೇಶಗಳನ್ನು ಚದರಿಸಿ ದ್ದಾಗ್ಯೂ ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದ ವರೆಗೆ ಪವಿತ್ರಾಲಯವಾಗಿರುವೆನು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.
ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.