ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
Cross references
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ನಿನ್ನ ಕೋಪ ವನ್ನೆಲ್ಲಾ ನೀನು ತೆಗೆದುಬಿಟ್ಟಿದ್ದೀ; ನೀನು ಕೋಪದ ಉರಿಯಿಂದ ತಿರುಗಿಕೊಂಡಿದ್ದೀ.
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಇಗೋ, ಕರ್ತನು ಭೂಮಿಯ ಅಂತ್ಯದ ವರೆಗೆ ಪ್ರಕಟಿಸಿದ್ದಾನೆ. ಚೀಯೋನಿನ ಕುಮಾ ರಿಯೇ--ಇಗೋ, ನಿನ್ನ ರಕ್ಷಣೆಯು ಬರುತ್ತದೆ; ಆತನ ಬಹುಮಾನವು ಆತನ ಸಂಗಡವೂ ಆತನ ಕೆಲಸವು ಆತನ ಮುಂದೆಯೂ ಅದೆ ಎಂದು ಹೇಳಿರಿ.ಆಗ ಅವರು--ಪರಿಶುದ್ಧ ಜನರೂ ಕರ್ತನು ವಿಮೋಚಿಸಿದ ವರೂ ಎಂದು ಕರೆಯಲ್ಪಡುವರು; ನೀನು ಕಂಡು ಕೊಳ್ಳಲ್ಪಟ್ಟವಳೂ ತೊರೆಯಲ್ಪಡದ ಪಟ್ಟಣವೂ ಎಂದು ಕರೆಯಲ್ಪಡುವಿ.
ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ;
ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.