ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
Cross references
ಆಗ ಅಬ್ರಹಾಮನು ಬೇರ್ಷೆಬದಲ್ಲಿ ತೋಪನ್ನು ನೆಟ್ಟು (ಪಿಚುಲ ವೃಕ್ಷ) ನಿತ್ಯದೇವರಾದ ಕರ್ತನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹು ದಿವಸ ಪ್ರವಾಸಿಯಾಗಿದ್ದನು.
ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
ಕರ್ತನ ಸಂಗಡ ವಿವಾದಿಸುವವರು ಮುರಿದು ಚೂರಾಗುವರು. ಆತನು ಆಕಾಶದಲ್ಲಿಂದ ಅವರ ಮೇಲೆ ಗುಡುಗುವನು. ಕರ್ತನು ಲೋಕಾಂತ್ಯದ ವರೆಗೂ ನ್ಯಾಯತೀರಿಸಿ ತನ್ನ ಅರಸನಿಗೆ ಬಲಕೊಡುವನು, ತನ್ನ ಅಭಿಷಿಕ್ತನ ಕೊಂಬನ್ನು ಉನ್ನತಮಾಡುವನು ಎಂಬದು.
ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
ಕರ್ತನು ನನಗಿ ರುವದನ್ನು ಸಿದ್ದಿಗೆ ತರುತ್ತಾನೆ; ಕರ್ತನೇ, ನಿನ್ನ ಕೃಪೆಯು ಎಂದೆಂದಿಗೂ ಅದೆ; ನಿನ್ನ ಸ್ವಂತ ಕೈಕೆಲಸಗಳನ್ನು ತೊರೆದುಬಿಡಬೇಡ.
ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ?
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ನಾನು ಪ್ರಸವಕ್ಕೆ ತಂದ ಮೇಲೆ ಹೆರದಂತೆ ಮಾಡೆನೋ ಎಂದು ಕರ್ತನು ಹೇಳುತ್ತಾನೆ; ಇಲ್ಲವೆ ಹೆರುವಂತೆ ಮಾಡುವವನಾದ ನಾನು ಗರ್ಭವನ್ನು ಮುಚ್ಚುವೆನೇ ಎಂದು ನಿನ್ನ ದೇವರು ಹೇಳುತ್ತಾನೆ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
ಅದಕ್ಕಾತನು--ಓ ನಂಬಿಕೆ ಯಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂ ದಿಗೆ ಇರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
ಆದರೆ ಯೇಸು ಅವರಿಗೆ--ನನ್ನ ತಂದೆಯು ಈ ವರೆಗೂ ಕೆಲಸ ಮಾಡುತ್ತಾನೆ ಮತ್ತು ನಾನೂ ಕೆಲಸ ಮಾಡುತ್ತೇನೆ ಅಂದನು.
ಯೇಸು ಅವನಿಗೆ--ಫಿಲಿಪ್ಪನೇ, ನಾನು ನಿಮ್ಮ ಸಂಗಡ ಇಷ್ಟು ಕಾಲ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲವೋ? ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ; ಹಾಗಾದರೆ ತಂದೆಯನ್ನು ನಮಗೆ ತೋರಿಸು ಎಂದು ನೀನು ಹೇಳುವದು ಹೇಗೆ?
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
ನಾವು ದೂತರಿಗೆ ತೀರ್ಪುಮಾಡುವೆವೆಂದು ನಿಮಗೆ ಗೊತ್ತಿಲ್ಲವೋ? ಹಾಗಾದರೆ ಐಹಿಕ ಜೀವಿತಕ್ಕೆ ಸಂಬಂಧ ಪಟ್ಟ ವಿಷಯಗಳಲ್ಲಿ ಇನ್ನು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.