ಎಲ್ಲಾ ಮನುಷ್ಯರು ಒಟ್ಟಿಗೆ ಅದನ್ನು ಕಾಣುವರು ಕರ್ತನ ಬಾಯಿಯೇ ಇದನ್ನು ನುಡಿದದೆ ಎಂದು ಒಬ್ಬನು ಕೂಗುತ್ತಾನೆ.
Cross references
ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
ಆತನ ಮಹಿಮೆಯುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ; ಆತನ ಮಹಿ ಮೆಯು ಭೂಮಿಯನ್ನೆಲ್ಲಾ ತುಂಬಲಿ. ಆಮೆನ್. ಆಮೆನ್.ಇಷಯನ ಮಗನಾದ ದಾವೀದನ ಪ್ರಾರ್ಥನೆಗಳು ಮುಗಿದವೆ.
ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.
ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
ಕರ್ತನು ಚೀಯೋನನ್ನು ಕಟ್ಟುವನು; ಆತನು ತನ್ನ ಮಹಿಮೆಯಲ್ಲಿ ಕಾಣಿಸಿಕೊಳ್ಳುವನು.
ದಿಕ್ಕಿಲ್ಲದವನ ಪ್ರಾರ್ಥನೆಗೆ ಕಿವಿಗೊಡುತ್ತಾನೆ; ಅವರ ಪ್ರಾರ್ಥನೆಯನ್ನು ತಿರಸ್ಕರಿ ಸುವದಿಲ್ಲ.
ನೀವು ತಿರಸ್ಕರಿಸಿ ತಿರುಗಿಬಿದ್ದರೆ ಕತ್ತಿಯ ಬಾಯಿಗೆ ತುತ್ತಾಗುವಿರಿ; ಕರ್ತನ ಬಾಯಿಯೇ ಇದನ್ನು ನುಡಿದಿದೆ.
ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
ನನ್ನ ಪರಿಶುದ್ಧ ಪರ್ವತದ ಲ್ಲೆಲ್ಲಾ ಕೇಡನ್ನಾಗಲಿ ನಾಶವನ್ನಾಗಲಿ ಯಾರೂ ಮಾಡು ವದಿಲ್ಲ; ಸಮುದ್ರವು ನೀರಿನಿಂದ ಮುಚ್ಚಿಕೊಂಡಿರು ವಂತೆ ಕರ್ತನ ತಿಳುವಳಿಕೆಯು ಭೂಮಿಯಲ್ಲಿ ತುಂಬಿ ಕೊಂಡಿರುವದು.
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನು ತನ್ನ ಪರಿ ಶುದ್ಧವಾದ ಬಾಹುವನ್ನು ಸಕಲ ಜನಾಂಗಗಳ ಕಣ್ಣು ಗಳಿಗೆ ತೋರಮಾಡಿದ್ದಾನೆ. ಭೂಮಿಯ ಅಂತ್ಯದವ ರೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡುವರು.
ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
ಇದಾದ ಮೇಲೆ ಒಂದು ಅಮಾವಾಸ್ಯೆಯಿಂದ ಇನ್ನೊಂದಕ್ಕೂ ಒಂದು ಸಬ್ಬತ್ತಿನಿಂದ ಇನ್ನೊಂದಕ್ಕೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವದಕ್ಕೆ ಬರುವರೆಂದು ಕರ್ತನು ಹೇಳುತ್ತಾನೆ.ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
ನೀರುಗಳು ಸಮುದ್ರವನ್ನು ಮುಚ್ಚುವ ಪ್ರಕಾರ ಭೂಮಿಯು ಕರ್ತನ ಮಹಿಮೆಯ ತಿಳುವಳಿಕೆಯಿಂದ ತುಂಬಿರುವದು.
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ಮಾನವರೆಲ್ಲರು ದೇವರ ರಕ್ಷಣೆಯನ್ನು ಕಾಣುವರು ಎಂದೂ ಬರೆದಿರುವಂತೆ ಹೀಗಾಯಿತು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.
ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿಸು ವರು; ಇದಲ್ಲದೆ ನಿಮ್ಮ ಯೌವನಸ್ಥರಿಗೆ ದರ್ಶನಗಳಾ ಗುವವು; ನಿಮ್ಮ ವೃದ್ಧರಿಗೆ ಕನಸುಗಳು ಬೀಳುವವು ಎಂದು ದೇವರು ಹೇಳುತ್ತಾನೆ.
ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.