ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
Cross references
ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.
ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
ಮಹಾ ಜಲಪ್ರವಾಹ ಗಳು ಘೋಷಿಸುವಂತೆ ಜನಾಂಗಗಳು ಘೋಷಿಸು ತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ ಅವರು ದೂರ ಓಡಿಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ ಸುಂಟರಗಾಳಿಯಿಂದ ಸುತ್ತಿ ಯಾಡುವ ದೂಳಿನಂತೆಯೂ ಅಟ್ಟಲ್ಪಡುವರು.ಇಗೋ, ಸಾಯಂಕಾಲದಲ್ಲಿ ಭಯಭ್ರಾಂತಿ; ಉದ ಯಕ್ಕೆ ಮುಂಚೆ ಅವನು ಇಲ್ಲದಂತಾಗುವನು. ನಮ್ಮನ್ನು ಸೂರೆಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆ ಹೊಡೆಯುವವರ ಪಾಡು ಇದೇ.
ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
ದೀನರ ಸಂತೋಷವು ಕರ್ತನಲ್ಲಿ ಹೆಚ್ಚಾಗುವದು, ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸು ವರು.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.
ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ಹಾಗಾದರೆ ಚೀಯೋನಿನ ಮಕ್ಕಳೇ, ನಿಮ್ಮ ದೇವ ರಾದ ಕರ್ತನಲ್ಲಿ ಉಲ್ಲಾಸಿಸಿ, ಸಂತೋಷವಾಗಿರ್ರಿ; ನಿಮಗೆ ಮುಂಗಾರು ಮಳೆಯನ್ನು ಸರಿಯಾಗಿ ಕೊಡು ತ್ತಾನೆ; ಮುಂಗಾರು ಹಿಂಗಾರು ಮಳೆಗಳನ್ನು ಮುಂಚಿನ ಹಾಗೆ ನಿಮಗೆ ಸುರಿಸುತ್ತಾನೆ.
ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.