ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
Cross references
ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.
ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
ಬಳಿಕ ಉನ್ನತದಿಂದ ಆತ್ಮ ನಮ್ಮ ಮೇಲೆ ಸುರಿ ಸಲ್ಪಡುವಾಗ, ಆಗ ಅರಣ್ಯಗಳು ಪೈರಿನ ಹೊಲ ವಾಗುವದು. ಪೈರಿನ ಹೊಲವು ಅರಣ್ಯವೆಂದೆಣಿಸಲ್ಪ ಡುವದು.
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.