ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
Cross references
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
ಆಗ ದರ್ಶನದಲ್ಲಿ ನಿನ್ನ ಪರಿಶುದ್ಧನ ಸಂಗಡ ಮಾತಾಡಿ ಹೇಳಿದ್ದೇನಂದರೆ --ಪರಾಕ್ರಮಶಾಲಿಯ ಮೇಲೆ ಸಹಾಯವನ್ನು ಇಟ್ಟಿ ದ್ದೇನೆ. ಆಯಲ್ಪಟ್ಟವನನ್ನು ಜನರೊಳಗಿಂದ ಉನ್ನತಕ್ಕೇರಿ ಸಿದ್ದೇನೆ.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ಆತನು ನನಗೆ--ನೀನು ನನ್ನ ಸೇವಕನು, ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ ಎಂದು ಹೇಳಿದನು.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು.
ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು.
ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
ಯೋಹಾನನು ಸಾಕ್ಷಿಕೊಟ್ಟು--ಆತ್ಮನು ಪಾರಿವಾಳ ದಂತೆ ಪರಲೋಕದಿಂದ ಇಳಿದು ಆತನ ಮೇಲೆ ನೆಲೆ ಗೊಂಡಿರುವದನ್ನು ನಾನು ನೋಡಿದೆನು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ
ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
ಆತನು (ದೇವರು) ನಮ್ಮನ್ನು ಅಂಧಕಾರದ ಶಕ್ತಿಯಿಂದ ಬಿಡಿಸಿ ತನ್ನ ಪ್ರಿಯಕುಮಾರನ ರಾಜ್ಯ ದೊಳಗೆ ಸೇರಿಸಿದನು.
ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.