ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
Cross references
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ಸಮುದ್ರದಿಂದ ಸಮುದ್ರದ ವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಆತನು ಆಳುವನು.
ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
ನ್ಯಾಯವು ಅರಣ್ಯದಲ್ಲಿಯೂ ನೆಲೆಗೊ ಳ್ಳುವದು. ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವದು.
ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು.
ಕುಂಟನು ಜಿಂಕೆಯಂತೆ ಹಾರುವನು ಮೂಕನ ನಾಲಿಗೆ ಹಾಡು ವದು; ಅರಣ್ಯದಲ್ಲಿ ನೀರೂ ಮರುಭೂಮಿಯಲ್ಲಿ ಒರ ತೆಗಳೂ ಒಡೆಯುವವು.
ಇಗೋ, ಒಂದು ವಾಣಿ, ಅರಣ್ಯದಲ್ಲಿ ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ; ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆ ಮಾಡಿರಿ.
ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು, ತಗ್ಗುಗಳ ಮಧ್ಯದಲ್ಲಿ ಬುಗ್ಗೆ ಗಳನ್ನು ಹೊರಡಿಸಿ ಅರಣ್ಯವನ್ನು ನೀರಿನ ಕೆರೆಯ ನ್ನಾಗಿಯೂ ಒಣನೆಲವನ್ನು ನೀರಿನ ಒರತೆಗಳನ್ನಾ ಗಿಯೂ ಮಾಡುವೆನು.
ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!
ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.
ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.