ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
Cross references
ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು,
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಕರ್ತನ ಬಲಗೈ ಉನ್ನತವಾಗಿದೆ; ಕರ್ತನ ಬಲಗೈ ಪರಾಕ್ರಮವನ್ನು ನಡಿಸುತ್ತದೆ.
ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
ಕರ್ತನು ನನಗೆ ಹೀಗೆ ಹೇಳಿದ್ದಾನೆ -- ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರು ಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವದೋ ಹಾಗೆಯೇ ಸೈನ್ಯಗಳ ಕರ್ತನು ಚೀಯೋನ್ ಪರ್ವತ ಕ್ಕೋಸ್ಕರವೂ ಅದರ ಗುಡ್ಡಕ್ಕೋಸ್ಕರವೂ ಯುದ್ಧ ಮಾಡಲು ಇಳಿದು ಬರುವನು.
ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು; ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
ಅವರು ಕರ್ತನ ಹಿಂದೆ ಹೋಗುವರು; ಆತನು ಸಿಂಹದ ಹಾಗೆ ಗರ್ಜಿಸುವನು; ಆತನು ಗರ್ಜಿಸುವಾಗ ಮಕ್ಕಳು ಪಶ್ಚಿಮದಿಂದ ನಡುಗಿಬರುವರು;
ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
ಅವನು ಹೇಳಿದ್ದೇನಂದರೆ--ಕರ್ತನು ಚೀಯೋನಿ ನಿಂದ ಘರ್ಜಿಸಿ ಯೆರೂಸಲೇಮಿನಿಂದ ತನ್ನ ಧ್ವನಿಗೈಯು ವನು; ಕುರುಬರ ವಾಸದ ಸ್ಥಳಗಳು ಗೋಳಾಡುತ್ತವೆ ಮತ್ತು ಕರ್ಮೆಲಿನ ತುದಿಯು ಒಣಗಿ ಹೋಗುತ್ತದೆ ಎಂದು ಹೇಳುತ್ತಾನೆ.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.