ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
Cross references
ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ದೂರ ಇರಬೇಕು. ನೀವು ಹೋಗುವ ಮಾರ್ಗವನ್ನು ತಿಳಿಯುವ ಹಾಗೆ ಅದರ ಹತ್ತಿರ ಬರಬೇಡಿರಿ. ನೀವು ಎಂದಾದರೂ ಆ ಮಾರ್ಗದಲ್ಲಿ ದಾಟಿ ಹೋಗಿರು ವದಿಲ್ಲ ಅಂದರು.
ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.
ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.
ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ನಿನ್ನ ಮಕ್ಕಳೆಲ್ಲಾ ಕರ್ತನಿಂದ ಬೋಧಿಸಲ್ಪಡು ವರು; ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರು ವದು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು ಅವನಿಗೆ ಹದಿನೇಳು ಬೆಳ್ಳಿ ಶೇಕೆಲುಗಳನ್ನು ತೂಕ ಮಾಡಿ ಕ್ರಯಕೊಟ್ಟೆನು.
ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ಇಗೋ, ನಾನು ನಿನ್ನ ಮಾರ್ಗಕ್ಕೆ ಮುಳ್ಳುಗಳ ಬೇಲಿ ಹಾಕುವೆನು; ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಗೋಡೆಯನ್ನು ಕಟ್ಟುವೆನು.
ಆದದರಿಂದ ಇಗೋ, ನಾನು ಅವಳನ್ನು ಮೋಹಿಸಿ ಅವಳನ್ನು ಅರಣ್ಯದೊಳಗೆ ಕರೆದುಕೊಂಡು ಬಂದು ಅವಳ ಸಂಗಡ ಹಿತಕರವಾಗಿ ಮಾತನಾಡು ವೆನು.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಪ್ರತಿಯೊಂದು ತಗ್ಗು ಮುಚ್ಚಿಸಲ್ಪಡುವದು, ಪ್ರತಿಯೊಂದು ಬೆಟ್ಟವು ತಗ್ಗಿಸಲ್ಪಡುವದು, ಡೊಂಕಾದವುಗಳು ನೆಟ್ಟಗಾಗುವವು ಮತ್ತು ಕೊರಕಲಾದ ದಾರಿಗಳು ಸಮವಾಗುವವು;
ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ
ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ