ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Cross references
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.
ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಇಗೋ, ಕರ್ತನ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳ ಲಾರದ ಹಾಗೆ ಕಿವುಡಲ್ಲ.
ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ಯೆರೆವಿಾಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಕರ್ತನು ಆಜ್ಞಾಪಿಸಿ ದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಹಿಡಿದು--ನೀನು ನಿಶ್ಚಯವಾಗಿ ಸಾಯಬೇಕು ಅಂದರು.
ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.
ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.