ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Cross references
ನನ್ನ ನಿಯಮಗಳನ್ನು ನೀವು ಅಸಡ್ಡೆಮಾಡಿದರೆ ಇಲ್ಲವೆ ನನ್ನ ನಿರ್ಣಯಗಳಲ್ಲಿ ನಿಮ್ಮ ಪ್ರಾಣವು ಅಸಹ್ಯಪಟ್ಟರೆ ನೀವು ನನ್ನ ಒಡಂಬಡಿ ಕೆಯನ್ನು ವಿಾರಿ ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಸುರಿಸಿದ ರೋಷದಿಂದಲೂ ನಿಮ್ಮನ್ನು ಜನ ಗಳೊಳಗಿಂದ ಹೊರತಂದು ನೀವು ಚದರಿಹೋಗಿ ರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸಿ,
ಹೌದು, ನನ್ನ ರೋಷದ ಬೆಂಕಿಯಿಂದ ನಾನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿ ಹೋಗುವಿರಿ.
ಪರಕೀಯರು ಅವನ ಶಕ್ತಿಯನ್ನು ನುಂಗಿಬಿಟ್ಟಿದ್ದಾರೆ; ಅದು ಅವನಿಗೆ ಗೊತ್ತಿಲ್ಲ; ಹೌದು, ನರೆ ಕೂದಲು ಅಲ್ಲಲ್ಲಿ ಅವನ ಮೇಲೆ ಅದೆ. ಆದಾಗ್ಯೂ ಅವನು ತಿಳಿಯದೇ ಇದ್ದಾನೆ.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ಸೈನ್ಯಗಳ ಕರ್ತನು ಹೇಳುವದೇ ನಂದರೆ ನೀವು ಕೇಳದೆ, ಹೃದಯದಲ್ಲಿ ಇಟ್ಟುಕೊಳ್ಳದೆ, ನನ್ನ ಹೆಸರಿಗೆ ಮಹಿಮೆಯನ್ನು ಕೊಡದೆ ಹೋದರೆ ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು, ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು; ಹೌದು, ಅವು ಗಳನ್ನು ಆಗಲೇ ಶಪಿಸಿದ್ದಾಯಿತು; ನೀವು ಅವುಗಳನ್ನು ಹೃದಯದಲ್ಲಿ ಇಟ್ಟುಕೊಳ್ಳುವದಿಲ್ಲ.
ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.