ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
Cross references
ನಿನ್ನ ಜನರಿಗೆ ನೀತಿಯಿಂದಲೂ ದೀನರಿಗೆ ನ್ಯಾಯದಿಂದಲೂ ಆತನು ತೀರ್ಪು ಮಾಡು ವನು.
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
ತಂದೆಯು ಮಕ್ಕಳ ಮೇಲೆ ಅಂತಃಕರಣ ಪಡುವ ಪ್ರಕಾರ ಕರ್ತನು ತನಗೆ ಭಯಪಡುವವರ ಮೇಲೆ ಅಂತಃಕರಣಪಡುವವನಾಗಿದ್ದಾನೆ.
ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.
ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು;
ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವಿ ಎಂಬದನ್ನು ನಾನು ತಿಳಿಯುವ ಹಾಗೆ ಕರ್ತನಾದ ದೇವರು ಶಿಕ್ಷಿತ ನಾಲಿಗೆಯನ್ನು ನನಗೆ ಕೊಟ್ಟಿದ್ದಾನೆ. ಆತನು ಹೊತ್ತಾರೆಯಿಂದ ಹೊತ್ತಾರೆಗೆ ನನ್ನನ್ನು ಎಚ್ಚರಿಸಿ ಸುಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಜಾಗರೂಕಗೊಳಿಸುತ್ತಾನೆ.
ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
ಇವುಗಳ ನ್ನೆಲ್ಲಾ ನನ್ನ ಕೈ ಉಂಟುಮಾಡಿತು; ಇವುಗಳೆಲ್ಲಾ ಇದ್ದವೆಂದು ಕರ್ತನು ಅನ್ನುತ್ತಾನೆ. ಆದರೆ ಇವನ ಮೇಲೆ ದೃಷ್ಟಿ ಇಡುವೆನು ದೀನನೂ ಜಜ್ಜಿದ ಆತ್ಮವುಳ್ಳ ವನೂ ನನ್ನ ವಾಕ್ಯಕ್ಕೆ ನಡುಗುವವನೂ ಯಾವನೋ ಅವನ ಮೇಲೆಯೂ ದೃಷ್ಟಿ ಇಡುವೆನು.
ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
ತರುವಾಯ ಕರ್ತನು--ಸೀಮೋನನೇ, ಸೀಮೋ ನನೇ, ಇಗೋ, ಸೈತಾನನು ನಿಮ್ಮನ್ನು ಗೋಧಿಯಂತೆ ಒನೆಯಬೇಕೆಂದು ಅಪೇಕ್ಷೆಪಟ್ಟಿದ್ದಾನೆ.
ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು; ನಾನು ಕೇಳುವಂತೆಯೇ ತೀರ್ಪು ಮಾಡುತ್ತೇನೆ ಮತ್ತು ನನ್ನ ತೀರ್ಪು ನ್ಯಾಯ ವಾದದ್ದು; ಯಾಕಂದರೆ ನಾನು ನನ್ನ ಸ್ವಂತಚಿತ್ತವನ್ನಲ್ಲ, ಆದರೆ ನನ್ನನ್ನು ಕಳುಹಿಸಿದ ತಂದೆಯ ಚಿತ್ತವು ನೆರವೇರ ಬೇಕೆಂದು ಅಪೆಕ್ಷಿಸುತ್ತೇನೆ.
ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;