ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
Cross references
ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.
ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.
ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.
ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.
ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.
ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.
ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್ ಆಗಿವೆ.
ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.