ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
Cross references
ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಆದರೆ ಯೆರಿಕೋವಿನ ಅರಸ ನಿಗೆ--ಇಗೋ, ಇಸ್ರಾಯೇಲ್ ಮನುಷ್ಯರು ದೇಶವನ್ನು ಪರಿಶೋಧನೆ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾ ರೆಂದು ತಿಳಿಸಲ್ಪಟ್ಟಿತು.
ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?
ನಾನು ದುಷ್ಟನಲ್ಲವೆಂದೂ ನಿನ್ನ ಕೈಯಿಂದ ತಪ್ಪಿಸುವವನಿಲ್ಲ ವೆಂದೂ ನೀನು ತಿಳುಕೊಳ್ಳುತ್ತೀಯಲ್ಲವೇ;
ಆತನು ಮನುಷ್ಯನ ಮೇಲೆ ಮನಸ್ಸಿಟ್ಟು, ತನ್ನ ಆತ್ಮವನ್ನೂ ಶ್ವಾಸವನ್ನೂ ತನ್ನಲ್ಲಿ ಕೂಡಿಸಿದರೆ;
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಬೆಟ್ಟಗಳು ಹುಟ್ಟುವದಕ್ಕಿಂತ ಮುಂಚೆಯೂ ನೀನು ಭೂಮಿಯನ್ನೂ ಲೋಕವನ್ನೂ ನಿರ್ಮಿಸುವದಕ್ಕಿಂತ ಮುಂಚೆಯೂ ನಿತ್ಯತ್ವದಿಂದ ನಿತ್ಯತ್ವಕ್ಕೂ ನೀನು ದೇವರಾಗಿದ್ದೀ.
ನಿನ್ನ ಸಿಂಹಾಸನವು ಪೂರ್ವಕಾಲ ದಿಂದ ಸ್ಥಿರವಾಗಿದೆ; ಯುಗಯುಗದಿಂದ ನೀನು ಇದ್ದೀ.
ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
ನಿತ್ಯತ್ವದಿಂದ ಇಲ್ಲವೆ ಆರಂಭದಿಂದ, ಭೂಮಿಯು ಇರುವದಕ್ಕೆ ಮುಂಚೆ ನಾನು ಸ್ಥಾಪಿಸಲ್ಪ ಟ್ಟೆನು.
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.
ಈಗ ಅವಳ ತುಚ್ಛತನವನ್ನು ಅವಳ ಮಿಂಡರ ಕಣ್ಣುಗಳ ಮುಂದೆ ಬಯಲು ಪಡಿಸುವೆನು; ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.
ನಾನು ಎಫ್ರಾಯಾಮಿಗೆ ಸಿಂಹದ ಹಾಗೆಯೂ ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ಹೌದು, ನಾನು, ನಾನೇ ಸೀಳಿಬಿಟ್ಟು ಹೋಗುವೆನು, ನಾನು ಎತ್ತಿಕೊಂಡು ಹೋಗಲು ಅವನನ್ನು ಯಾರೂ ಬಿಡಿಸಲಾರರು.ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.