ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
Cross references
ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.
ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,
ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ