ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
Cross references
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
ಆಗ ಅವರು ಒಬ್ಬರಿಗೊ ಬ್ಬರು--ಈ ಕಾರ್ಯವನ್ನು ಮಾಡಿದವನಾರು ಅಂದರು. ಅವರು ವಿಚಾರಿಸಿ ಕೇಳಿದಾಗ ಅವರು--ಯೋವಾಷನ ಮಗನಾದ ಗಿದ್ಯೋನನು ಈ ಕಾರ್ಯ ಮಾಡಿದನು ಅಂದರು.
ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವದಕ್ಕೂ ಸಂತೋಷಪಡುವದಕ್ಕೂ ಕೂಡಿಬಂದರು. ಯಾಕಂದರೆ--ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು ಎಂದು ಅವರು ಹೇಳಿಕೊಂಡರು.
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಆಗ ಅವರು--ಅಪ ರಾಧ ಕಾಣಿಕೆಯಾಗಿ ನಾವು ಅದರ ಸಂಗಡ ಕಳುಹಿಸ ತಕ್ಕದ್ದೇನು ಅಂದರು. ಅದಕ್ಕವರು--ಫಿಲಿಷ್ಟಿಯರ ಅಧಿ ಪತಿಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬರಿಗೆ ಗಡ್ಡೆವ್ಯಾಧಿಯ ವಿಧವಾದ ಐದು ಬಂಗಾರದ ಗಡ್ಡೆಗಳನ್ನೂ ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ; ಯಾಕಂದರೆ ನಿಮ್ಮೆ ಲ್ಲರಿಗೂ ನಿಮ್ಮ ಅಧಿಪತಿಗಳಿಗೂ ಒಂದೇ ತರವಾದ ವ್ಯಾಧಿಯು ಅದೆ.
ಆದದರಿಂದ ನೀನು ಸಮಸ್ತ ಇಸ್ರಾಯೇಲ್ಯರನ್ನೂ ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ ಈಜೆಬೇಲಳ ಮೇಜಿನ ಹತ್ತಿರ ಭೋಜನ ಮಾಡುವ ತೋಪುಗಳ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕರ್ಮೆಲ್ ಬೆಟ್ಟಕ್ಕೆ ಕೂಡಿಸು ಅಂದನು.
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ನೀವು ಇಷ್ಟ ಪಟ್ಟ ಏಲಾಮರಗಳ ನಿಮಿತ್ತ ನಾಚಿಕೊಳ್ಳುವರು, ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು.
ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ಅರಸನಾದ ಬೆಲ್ಯಚ್ಚರನು ತನ್ನ ಪ್ರಭುಗಳಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಆ ಸಾವಿರ ಮಂದಿಯ ಮುಂದೆ ಅವನು ದ್ರಾಕ್ಷಾರಸವನ್ನು ಕುಡಿದನು.
ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ; ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅವೆಲ್ಲವೂ ಶಿಲ್ಪಿಗಳ ಕೈಕೆಲಸವೇ, ಬಲಿ ಅರ್ಪಿಸುವ ಮನುಷ್ಯರು ಹಸುಗಳಿಗೆ ಮುದ್ದಿಡಲೆಂದು ಅವರು ಅವರ ವಿಷಯ ವಾಗಿ ಹೇಳಿದರು.
ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.
ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.