ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Cross references
ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ಈ ಮನೆಯು ಶಿಲೋವಿನ ಹಾಗೆ ಆಗುವದೆಂದೂ ಈ ಪಟ್ಟಣವು ನಿವಾಸಿಗಳಿಲ್ಲದೆ ಹಾಳಾಗುವದೆಂದೂ ಕರ್ತನ ಹೆಸರಿನಲ್ಲಿ ಯಾಕೆ ನೀನು ಪ್ರವಾದಿಸಿದ್ದೀ ಅಂದರು. ಆಗ ಜನರೆಲ್ಲರೂ ಕರ್ತನ ಆಲಯದಲ್ಲಿ ಯೆರೆವಿಾಯನಿಗೆ ವಿರೋಧವಾಗಿ ಕೂಡಿಕೊಂಡರು.
ಪಾರಸಿಯ ಅರಸನಾದ ಕೋರೇಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆ ಶಚ್ಚರನೆಂಬ ದಾನಿಯೇಲನಿಗೆ ಒಂದು ಸಂಗತಿಯು ಪ್ರಕಟವಾಯಿತು. ಬಹಳ ಕಷ್ಟದ ಆ ಸಂಗತಿಯು ಸತ್ಯವಾಗಿದೆ. ಅವನು ಕಂಡ ದರ್ಶನವನ್ನು ಗ್ರಹಿಸಿ ಆ ಸಂಗತಿಯನ್ನು ಮಂದಟ್ಟು ಮಾಡಿಕೊಂಡನು.