ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
Cross references
ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
ಓ ಕರ್ತನೇ, ನಿಜವಾಗಿ ನಾನು ನಿನ್ನ ಸೇವಕನು. ಹೌದು, ನಾನು ನಿನ್ನ ಸೇವಕನು ನಿನ್ನ ದಾಸಿಯ ಮಗನು; ನೀನು ನನ್ನ ಬಂಧನಗಳನ್ನು ಬಿಚ್ಚಿದ್ದೀ.
ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.