ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
Cross references
ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
ಕರ್ತನು ನಮ್ಮ ನ್ಯಾಯಾ ಧಿಪತಿಯಾಗಿದ್ದಾನೆ, ಕರ್ತನು ನಮಗೆ ಆಜ್ಞೆ ಕೊಡು ವಾತನು, ಕರ್ತನೇ ನಮ್ಮ ರಾಜನು; ಆತನೇ ನಮ್ಮನ್ನು ರಕ್ಷಿಸುವನು.
ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು.
ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.
ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ವಿಮೋಚಕನು ಚೀಯೋನಿಗೂ ಯಾಕೋಬ್ಯರಲ್ಲಿ ತಮ್ಮ ದ್ರೋಹದಿಂದ ತಿರುಗುವವರಿಗೂ ಬರುವೆ ನೆಂದು ಕರ್ತನು ಅನ್ನುತ್ತಾನೆ.ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವೇನಂದರೆ--ನೀವು ಈ ಒಡಂಬಡಿ ಕೆಯ ಮಾತುಗಳನ್ನು ಕೇಳಿರಿ;
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
ಇದಲ್ಲದೆ ಆತನ ತಲೆಯ ಮೇಲ್ಭಾಗದಲ್ಲಿ--ಇವನು ಯೆಹೂದ್ಯರ ಅರಸನಾದ ಯೇಸು ಎಂದು ಆತನ ವಿಷಯವಾದ ಅಪರಾಧವನ್ನು ಬರೆಯಿಸಿದರು.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.