ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
Cross references
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ.
ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
ನಾನೇ ನಿನ್ನ ನೀತಿಯನ್ನೂ ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಅವು ನಿನಗೆ ಪ್ರಯೋಜನವಾಗು ವದಿಲ್ಲ.
ಜನಾಂ ಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದಾಗ್ಯೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.
ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
ಅವರು ಮರಕ್ಕೆ ನೀನು ನನ್ನ ತಂದೆ ಎಂದೂ ಕಲ್ಲಿಗೆ--ನೀನು ನನ್ನನ್ನು ಹೆತ್ತಿದ್ದೀ ಎಂದೂ ಹೇಳುತ್ತಾರಲ್ಲಾ? ಯಾಕಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ಅವರ ಕಷ್ಟ ಕಾಲದಲ್ಲಿ--ಎದ್ದು, ನಮ್ಮನ್ನು ರಕ್ಷಿಸು ಎಂದು ಹೇಳುವರು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.
ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.