ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
Cross references
ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ.
ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--
ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.