ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
Cross references
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ
ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
ಇವರು ತಮ್ಮ ಸಹೋದರರಾದ ತಮ್ಮ ಮುಖ್ಯಸ್ಥರ ಸಂಗಡ ಕೂಡಿಕೊಂಡು--ದೇವರ ಸೇವಕನಾದ ಮೋಶೆಯ ಕೈಯಿಂದ ಕೊಟ್ಟ ದೇವರ ನ್ಯಾಯಪ್ರಮಾಣದಲ್ಲಿ ನಡೆಯುತ್ತೇವೆಂದೂ ಕರ್ತ ನಾದ ನಮ್ಮ ದೇವರ ಆಜ್ಞೆಗಳನ್ನೂ ಆತನ ನ್ಯಾಯ ಗಳನ್ನೂ ಆತನ ಕಟ್ಟಳೆಗಳನ್ನೂ ಎಲ್ಲವನ್ನೂ ಕೈಕೊಂಡು ಮಾಡುತ್ತೇವೆಂದೂ;
ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ.
ಅವನು ಕರ್ತನಿಗೆ ಆಣೆ ಇಟ್ಟು ಶಕ್ತಿ ಯುಳ್ಳ ಯಾಕೋಬನ ದೇವರಿಗೆ ಪ್ರಮಾಣಮಾಡಿ ಕೊಂಡದ್ದೇನಂದರೆ--
ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ.
ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.
ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ.
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--