ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.
Cross references
ಅದಕ್ಕೆ ಆರೋನನು ಅವರಿಗೆ--ನಿಮ್ಮ ಹೆಂಡತಿಯರ ಮತ್ತು ನಿಮ್ಮ ಕುಮಾರ ಕುಮಾರ್ತೆಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಕಿತ್ತು ನನ್ನ ಬಳಿಗೆ ತನ್ನಿರಿ ಅಂದನು.
ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಉಳಿಯಿಂದ ರೂಪಿಸಿ ಎರಕಹೊಯ್ದ ಕರುವಾಗಿ ಮಾಡಿದನು. ಆಗ ಅವರು--ಓ ಇಸ್ರಾ ಯೇಲೇ, ನಿನ್ನನ್ನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ದೇವರುಗಳು ಇವೇ ಆಗಿರಲಿ ಅಂದರು.
ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ.
ಅವನು ಆ ಸಾವಿರದ ನೂರು ರೂಪಾಯಿಗಳಷ್ಟು ಬೆಳ್ಳಿಯನ್ನು ತನ್ನ ತಾಯಿಗೆ ತಿರಿಗಿ ಕೊಟ್ಟಾಗ ಅವನ ತಾಯಿ--ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹವನ್ನೂ ಮಾಡುವದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಕರ್ತನಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದೆನು; ಆದದರಿಂದ ನಾನು ಅದನ್ನು ನಿನಗೆ ತಿರಿಗಿ ಕೊಡುವೆನು ಅಂದಳು.
ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರಿಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತಕ್ಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ ಎರಕದ ವಿಗ್ರಹ ವನ್ನೂ ಮಾಡಿದನು. ಅವು ವಿಾಕನ ಮನೆಯಲ್ಲಿದ್ದವು.
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ,
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಇದಲ್ಲದೆ, ಕರ್ತನು ನನಗೆ ಹೇಳಿದ್ದೇನಂದರೆ-- ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡು ಬಂದಿದೆ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
ಅವರು ಅರಸುಗಳನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ, ಪ್ರಧಾನರನ್ನು ನೇಮಿಸಿದ್ದಾರೆ, ಅದು ನನಗೆ ತಿಳಿಯಲಿಲ್ಲ; ಅವರು ಕಡಿದುಬಿಡಲ್ಪಡುವ ಹಾಗೆ ತಮ್ಮ ಬೆಳ್ಳಿಯಿಂದಲೂ ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.