ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
Cross references
ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು.
ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು.
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಅವರು ತಮಗೆ ಕೊಡಲ್ಪಟ್ಟ ಹೋರಿ ಯನ್ನು ತೆಗೆದುಕೊಂಡು ಸಿದ್ಧಮಾಡಿ--ಓ ಬಾಳನೇ, ನಮ್ಮನ್ನು ಕೇಳೆಂದು ಉದಯದಿಂದ ಮಧ್ಯಾಹ್ನದ ವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ ಪ್ರತ್ಯುತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
ಆಗ ಎಲೀಯನು ಅವರಿಗೆ--ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಇರಲಿ ಅಂದನು. ಇವರು ಅವರನ್ನು ಹಿಡಿ ದರು; ಎಲೀಯನು ಅವರನ್ನು ಕೀಷೋನ್ಹಳ್ಳದ ಬಳಿಗೆ ತಕ್ಕೊಂಡುಹೋಗಿ ಅಲ್ಲಿ ಅವರನ್ನು ಕೊಂದು ಹಾಕಿದನು.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.
ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟ ಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಯಾಕಂದರೆ ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.