ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
Cross references
ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ
ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
ಕುಂದಿಸಿದ ಜನರನ್ನು ನೀನು ರಕ್ಷಿಸುವಿ; ಆದರೆ ನೀನು ಗರ್ವಿಷ್ಟರ ಕಣ್ಣುಗಳನ್ನು ತಗ್ಗಿಸುವಿ.
ಅವನ ಪ್ರಭೆಯನ್ನು ತಡೆದಿ; ಅವನ ಸಿಂಹಾಸನವನ್ನು ನೆಲಕ್ಕೆ ಹಾಕಿದ್ದೀ.
ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
ಅವರ ಬಾಗಲುಗಳಲ್ಲಿ ಪ್ರಲಾಪವು ದುಃಖವು ತುಂಬಿರು ವದು; ಅವಳು ಹಾಳಾಗಿ ನೆಲದ ಮೇಲೆ ಕುಳಿತು ಕೊಳ್ಳುವಳು.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
ಆತನು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾ. ಉನ್ನತ ದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾನೆ. ಅದನ್ನು ಕೆಡವಿ ನೆಲಸಮಮಾಡಿ ದೂಳಿಗೆ ತಂದಿದ್ದಾನೆ.
ನಿಶ್ಚಿಂತೆಯರಾದ ಹೆಂಗಸರೇ, ಏಳಿರಿ, ನನ್ನ ಸ್ವರ ವನ್ನು ಕೇಳಿರಿ, ಭಯವಿಲ್ಲದ ಹೆಣ್ಣುಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.
ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆ--ಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ, ಪರಿಹಾಸ್ಯ ಮಾಡುತ್ತಾಳೆ; ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ.
ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ.
ನಾನು ಹೊಲಕ್ಕೆ ಹೋದರೆ, ಇಗೋ, ಕತ್ತಿಯಿಂದ ಕೊಲ್ಲಲ್ಪಟ್ಟವರು ಪಟ್ಟಣದಲ್ಲಿ ಪ್ರವೇಶಿಸಿದರೆ, ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು. ಹೌದು, ಪ್ರವಾದಿಯೂ ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.
ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಚೀಯೋನ್ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.
ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು.
ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ;
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು.
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು