ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
Cross references
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.
ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.
ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.
ಆ ಬರಹವು ಏನಂದರೆ ಮೆನೇ ಮೆನೇ ತೇಕಲ್ ಉಫ ರ್ಸಿನ್,
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.
ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.
ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.