ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
Cross references
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.
ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.