ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
Cross references
ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
ನಿನ್ನ ಸಂಗಡ ಮಾತನಾಡಿ ಹೇಳಿದ ಈ ಜನರಿಗೆ ನೀನು ಹೀಗೆ ಹೇಳಬೇಕು--ನನ್ನ ಕಿರು ಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರು ವದು. ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು; ನಾನಾದರೋ ನಿಮ್ಮ ನೊಗವನ್ನು ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ಆದರೆ ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಎಂದು ಹೇಳು ಅಂದರು.
ಅಲ್ಲಿ ಕರ್ತನ ಒಬ್ಬ ಪ್ರವಾದಿ ಇದ್ದನು; ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯೆಕ್ಕೆದುರಾಗಿ ಹೊರಟುಹೋಗಿ ಅವರಿಗೆ--ಇಗೋ, ನಿಮ್ಮ ಪಿತೃಗಳ ಕರ್ತನಾದ ದೇವರು ಯೆಹೂದದ ಮೇಲೆ ಉರಿಗೊಂಡದ್ದರಿಂದ ಆತನು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿರಲಾಗಿ, ನೀವು ಆಕಾಶಕ್ಕೆ ಮುಟ್ಟುವ ಉಗ್ರದಿಂದ ಅವರನ್ನು ಕೊಂದುಹಾಕಿದ್ದೀರಿ.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
ಲೋಕವನ್ನು ಕಾಡ ನ್ನಾಗಿ ಮಾಡಿ ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದ ವನು ಈ ಮನುಷ್ಯನೋ ಎಂದು ಅಂದುಕೊಳ್ಳುವರು.
ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.
ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ಕರ್ತನ ಕೋಪವು ಅವರನ್ನು ವಿಭಾಗಿಸಿತು; ಆತನು ಇನ್ನು ಅವರನ್ನು ಲಕ್ಷಿಸುವದಿಲ್ಲ; ಅವರು ಯಾಜಕರನ್ನು ಗೌರವಿಸಲಿಲ್ಲ; ಅವರು ಹಿರಿಯರಿಗೆ ದಯೆತೋರಿ ಸಲಿಲ್ಲ.
ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು.
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.